Skip to main content

Posts

Featured

ಕಿತ್ತೂರ ರಾಣಿ ಚೆನ್ನಮ್ಮ ವಸತಿ ಶಾಲೆಗೆ ಜಿಲ್ಲಾ ಉಪ ನಿರ್ದೇಶಕರಿಂದ ಗೌರವಯುತ ಭೇಟಿ: ವಿದ್ಯಾರ್ಥಿನಿಯರಿಗೆ ಪ್ರೇರಣೆ

  ಕಿತ್ತೂರ ರಾಣಿ ಚೆನ್ನಮ್ಮ ವಸತಿ ಶಾಲೆಗೆ ಜಿಲ್ಲಾ ಉಪ ನಿರ್ದೇಶಕರಿಂದ ಗೌರವಯುತ ಭೇಟಿ: ವಿದ್ಯಾರ್ಥಿನಿಯರಿಗೆ ಪ್ರೇರಣೆ ಆ ಲಮೆಲ, (ಆಗಸ್ಟ್ 25): ಇಲ್ಲಿನ ವಿಭೂತಿಹಳ್ಳಿಯ  ಕಿತ್ತೂರ ರಾಣಿ ವಸತಿ ಶಾಲೆಗೆ ಮಾನ್ಯ ಜಿಲ್ಲಾ ಉಪ ನಿರ್ದೇಶಕರಾದ ಶ್ರೀ ಮಹೇಶ್ ಪೂದ್ದಾರ್ ಸಾಹೇಬರು ಇಂದು ಸಾಯಂಕಾಲ ಗೌರವಯುತವಾಗಿ ಭೇಟಿ ನೀಡಿ, ವಿದ್ಯಾರ್ಥಿನಿಯರ ಮತ್ತು ಶಿಕ್ಷಕರೊಂದಿಗೆ ಸಂವಾದ ನಡೆಸಿದರು. ಅವರ ಜೊತೆಯಲ್ಲಿ ತಾಲೂಕು ಮಟ್ಟದ ಅಧಿಕಾರಿಯಾದ ಶ್ರೀಮತಿ ಭವಾನಿ ಪಾಟೀಲ್ ಮೇಡಂ ಸಹ ಉಪಸ್ಥಿತರಿದ್ದರು. ಈ ಸಂದರ್ಭದಲ್ಲಿ ಮಾನ್ಯ ಸಾಹೇಬರು ವಿದ್ಯಾರ್ಥಿನಿಯರೊಂದಿಗೆ ಆತ್ಮೀಯವಾಗಿ ಬೆರೆತು, ಅವರ ಸಮಸ್ಯೆಗಳನ್ನು ಸಹಾನುಭೂತಿಯಿಂದ ಆಲಿಸಿದರು. ಸಮಸ್ಯೆಗಳಿಗೆ ಶೀಘ್ರ ಪರಿಹಾರ ಒದಗಿಸುವ ಭರವಸೆಯನ್ನು ನೀಡಿದರು. ವಿಶೇಷವಾಗಿ, ವಿದ್ಯಾರ್ಥಿನಿಯರ ಮನೋಬಲ ಹೆಚ್ಚಿಸಲು ಮತ್ತು ಹೋರಾಟದ ನೋಭಾವವನ್ನು ಬೆಳೆಸಲು, ಡಾ. ಬಿ.ಆರ್. ಅಂಬೇಡ್ಕರ್ ಅವರ ಸ್ವರಚಿತ ಹಾಡುಗಳನ್ನು ತಮ್ಮ ಸುಶ್ರಾವ್ಯ ಕಂಠದಿಂದ ಹಾಡಿ ಮಕ್ಕಳಿಗೆ ಸ್ಫೂರ್ತಿ ತುಂಬಿದರು. ಶಿಕ್ಷಣದ ಮಹತ್ವ, ಪರಿಶ್ರಮ ಮತ್ತು ಸಮಾಜ ಸೇವೆಯ ಮೌಲ್ಯಗಳ ಬಗ್ಗೆ ಅಮೂಲ್ಯ ಮಾರ್ಗದರ್ಶನ ನೀಡಿದರು. ಶಿಕ್ಷಕರೊಂದಿಗೆ ಪ್ರತ್ಯೇಕವಾಗಿ ಸಭೆ ನಡೆಸಿದ ಅವರು, ಶಿಕ್ಷಣ ಕ್ಷೇತ್ರದಲ್ಲಿ ಬದ್ಧತೆ, ಹೊಣೆಗಾರಿಕೆ ಮತ್ತು ನೈತಿಕ ಮೌಲ್ಯಗಳ ಮಹತ್ವವನ್ನು ಒತ್ತಿ ಹೇಳಿದರು. ಶಾಲೆಯ ಗುಣಮಟ್ಟವನ್ನು ಹೆಚ್ಚಿಸಲು ಅಗತ್ಯ ಸಲಹೆಗಳನ್ನು ನೀಡಿದ...

Latest Posts

ಸ್ನೇಹದ ಔತಣ – ಬಸವಕಲ್ಯಾಣ

ಕಣ್ಣಂಚಲಿ ತೊಟ್ಟಿಕ್ಕುವ ಆರ್ದ್ರ ಘಳಿಗೆ

ವಿಭೂತಿಹಳ್ಳಿ ಕಿತ್ತೂರು ಚೆನ್ನಮ್ಮ ಶಾಲೆಯಲ್ಲಿ 10 ನೇ ತರಗತಿ ವಿದ್ಯಾರ್ಥಿಗಳಿಗೆ ಬೀಳ್ಕೊಡುಗೆ ಸಮಾರಂಭ

ಸರ್ವರಿಗೂ ಎಳ್ಳು ಅಮಾವಾಸ್ಯೆಯ ಹಾರ್ದಿಕ ಶುಭಾಶಯಗಳು.

KRCRS ಶಾಲೆ ಜಿಲ್ಲಾ ಮಟ್ಟದ ವಾಲಿಬಾಲ್ ಪಂದ್ಯಾಟಕ್ಕೆ ಆಯ್ಕೆ.

ಯಾದ್(ನೆನಪಪರ್ವತ)ಗಿರಿ

ಕಣ್ಮನಸೆಳೆಯುವ ಕಲ್ಯಾಣಿ ಏವೂರ

ಬರದ ಬರೆ

ಇಂದು ನನ್ನ ಜನ್ಮ ದಿನ..