ವಾರ್ಷಿಕ ಸ್ನೇಹ ಸಮ್ಮೇಳನ ಹಾಗೂ ಎಸ್.ಎಸ್.ಎಲ್.ಸಿ ವಿದ್ಯಾರ್ಥಿನಿಯರ ಬೀಳ್ಕೊಡುಗೆ ಸಮಾರಂಭ ವೈಭವವಾಗಿ ನೆರವೇರಿತು.
ವಿಭೂತಿಹಳ್ಳಿ (ಆಲಮೇಲ), ಫೆ. 18, 2026: ಕಿತ್ತೂರು ರಾಣಿ ಚೆನ್ನಮ್ಮ ವಸತಿ ಶಾಲೆ, ವಿಭೂತಿಹಳ್ಳಿ (ತಾ. ಆಲಮೇಲ) ಇಲ್ಲಿ 2025-26ನೇ ಸಾಲಿನ ಶಾಲಾ ವಾರ್ಷಿಕೋತ್ಸವ ಹಾಗೂ ಎಸ್.ಎಸ್.ಎಲ್.ಸಿ ವಿದ್ಯಾರ್ಥಿನಿಯರ ಬೀಳ್ಕೊಡುಗೆ ಸಮಾರಂಭವು ಬುಧವಾರ ಮಧ್ಯಾಹ್ನ 3.00 ಗಂಟೆಗೆ ಶಾಲಾ ಆವರಣದಲ್ಲಿ ಅದ್ದೂರಿಯಾಗಿ ನಡೆಯಿತು. ಕಾರ್ಯಕ್ರಮಕ್ಕೆ ದಿವ್ಯ ಸಾನಿಧ್ಯವನ್ನು ಶ್ರೀ ಶ್ರೀ ಶ್ರೀ ಷ. ಬ್ರ. ಆನಂದಲಿಂಗ ಶಿವಾಚಾರ್ಯರು, ಶ್ರೀ ಮಲ್ಲಿಕಾರ್ಜುನ ಗವಿಮಠ, ಮಾರ್ಸನಹಳ್ಳಿ ವಹಿಸಿದ್ದರು. ಉದ್ಘಾಟಕರಾಗಿ ನಾದ ಗ್ರಾಮದ ಸರ್ಕಾರಿ ಪ್ರೌಢಶಾಲೆಯ ಮುಖ್ಯಗುರುಗಳಾದ ಶ್ರೀ ಸಿ. ಎಂ. ಬಂಡಗಾರ ಭಾಗವಹಿಸಿ ಜ್ಯೋತಿ ಬೆಳಗಿಸುವ ಮೂಲಕ ಕಾರ್ಯಕ್ರಮಕ್ಕೆ ಚಾಲನೆ ನೀಡಿದರು. ಅಧ್ಯಕ್ಷತೆಯನ್ನು ಶಾಲೆಯ ಪ್ರಾಂಶುಪಾಲರಾದ ಶ್ರೀ ಪ್ರಭಾಕರ ಪಾಟೀಲ ವಹಿಸಿದ್ದರು. ಮುಖ್ಯ ಅತಿಥಿಗಳಾಗಿ ಜಿಲ್ಲಾ ಸಮನ್ವಯಾಧಿಕಾರಿಗಳಾದ ಶ್ರೀ ರವೀಂದ್ರ ಬಂತನಾಳ ಉಪಸ್ಥಿತರಿದ್ದರು. ಕಾರ್ಯಕ್ರಮವು 9ನೇ ತರಗತಿ ವಿದ್ಯಾರ್ಥಿನಿಯರಿಂದ ಪ್ರಾರ್ಥನಾ ಗೀತೆಯೊಂದಿಗೆ ಆರಂಭಗೊಂಡಿತು. ಬಳಿಕ ವಿದ್ಯಾರ್ಥಿನಿಯರಿಂದ ಸ್ವಾಗತ ಗೀತೆ ಮನಮೋಹಕವಾಗಿ ಮೂಡಿಬಂದಿತು. ಕಾರ್ಯಕ್ರಮವನ್ನು ಶಾಲೆಯ ಹಿಂದಿ ಶಿಕ್ಷಕರಾದ ಶ್ರೀ ಬಸವರಾಜ ಭೂತಿ ಅವರು ಸೊಗಸಾಗಿ ನಿರೂಪಿಸಿದರು. ಕನ್ನಡ ಶಿಕ್ಷಕರಾದ ಶ್ರೀ ಧರೆಪ್ಪ ಬಿರಾದಾರ ಸ್ವಾಗತ ಭಾಷಣ ಮಾಡಿದರು. ಶಾಲೆಯ ವಾರ್ಷಿಕ ವರದಿಯನ್ನು ಶಿಕ್ಷಕಿ ಶ್ರೀಮತಿ ರೂಪಾ...







